ಮೂಕಜ್ಜಿಯ ಕನಸುಗಳು ಡಾ. ಶಿವರಾಮ ಕಾರಂತರು / Mookajji's dreams are dr. Sivarama Karanth
ಮೂಕಜ್ಜಿಯ ಕನಸುಗಳು ಡಾ. ಶಿವರಾಮ ಕಾರಂತರು / Mookajji's dreams
are dr. Sivarama Karanth
ಮೂಕಜ್ಜಿಯ ಕನಸುಗಳು ಡಾ. ಶಿವರಾಮ ಕಾರಂತರು ರಚಿಸಿರುವ ಒಂದು
ಕಾದಂಬರಿ. ಈ ಕಾದಂಬರಿಗೆ ೧೯೭೭ರಲ್ಲಿ ಜ್ಞಾನಪೀಠ ಪ್ರಶಸ್ತಿ ಲಭಿಸಿದೆ.[೧] ಅಜ್ಜಿ ಮತ್ತು
ಮೊಮ್ಮಗನ ನಡುವೆ ನಡೆಯೋ ಸಂಭಾಷಣೆಯನ್ನು ಶಿವರಾಮ ಕಾರಂತರು ಅದ್ಭುತವಾಗಿ ಕಟ್ಟಿ ಕೊಟ್ಟಿದ್ದಾರೆ.
ಮೊಮ್ಮಗನ ಪ್ರಶ್ನೆಗಳಿಗೆ ಅಜ್ಜಿ ತನ್ನ ಅನಿಸಿಕೆಗಳನ್ನು ಹೇಳುತ್ತಾ ಇಂದಿನ ಜಮಾನದ ಜನತೆಗೆ ಇರುವ
ಹಲವು ಬಗೆಯ ಗೊಂದಲಗಳನ್ನು ಬಿಡಿಸಿ ತಿಳಿಸಿದ್ದಾರೆ.ಈ ಕಾದಂಬರಿಯಲ್ಲಿ ಬರುವ ಮೂಕಜ್ಜಿಗೆ ಒಂದು
ಅಚ್ಚರಿಯಾದ ಶಕ್ತಿ ಇರುತ್ತದೆ.ಅದೇನೆಂದರೆ,ಯಾವುದೇ ವಸ್ತು ಅಥವಾ ಮನುಷ್ಯನನ್ನು ಕಂಡರೆ ಅವರ ಬಗ್ಗೆ ಕನಸುಗಳು
ಮೂಡುತ್ತವೆ.ಅಂದರೆ ಇವು ನಿದ್ದೆಯಲ್ಲಿ ಬರೋ ಕನಸುಗಳು ಅಲ್ಲ.ಎಚ್ಚರವಿದ್ದಾಗ ಬರುವ ಕನಸುಗಳು. ಈ
ಕಾದಂಬರಿಯ ಕಥಾನಾಯಕಿ, ಮೂಕಜ್ಜಿ, ತನ್ನ ಕನಸುಗಳ ಬಗ್ಗೆ ಅವಳ ಮೊಮ್ಮಗನ ಹತ್ತಿರ ಹೇಳಿಕೊಳ್ಳುತ್ತಾಳೆ. ಈ
ಕನಸುಗಳು ಮನುಷ್ಯನ ಸಾಮಾಜಿಕ ಬೆಳವಣಿಗೆಗಳು ಮತ್ತು ದೇವರ ಸ್ವರೂಪದ ಬಗ್ಗೆ ಇರುತ್ತದೆ.ಇಲ್ಲಿ
ಹಲವು ಪಾತ್ರಗಳು ಬಂದು ಹೋದರು ಅಜ್ಜ್ಜಿ ಮತ್ತು ಮೊಮ್ಮಗನ ಪಾತ್ರಗಳು ಮುಖ್ಯವಾದವು ತಂತಮ್ಮ ಅಪಕ್ವ
ನಂಬುಗೆಗಳನ್ನು ಪರರ ಮೇಲೆ ಹೊರಿಸಿದ ಜನರ ಕಥೆಯೂ ಇಲ್ಲಿದೆ. ಅದರಿಂದಾಗಿ ಇಂದಿನ ನಮಗೆ ಕೇಳಿಸದೇ
ಹೋದ ಕೆಲವು ಯಾತನೆಯ ಧ್ವನಿಗಳನ್ನು ಲೇಖಕರು ಬಹಳ ಸೊಗಸಾಗಿ ಪುಟಗಳ ಮೇಲೆ ತಂದಿದ್ದಾರೆ.
ಡಾ. ಕೆ. ಶಿವರಾಮ ಕಾರಂತರ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ
ಕಾದಂಬರಿ-ಮೂಕಜ್ಜಿಯ ಕನಸುಗಳು. ವೈಚಾರಿಕತೆ ಮತ್ತು ಮಾನವೀಯತೆಯ ಸಮನ್ವಯವನ್ನು ಕಥಾನಾಯಕಿ
ಮೂಕಜ್ಜಿ ಸಾರುತ್ತಾಳೆ. ಭಾರತೀಯ ಧರ್ಮಶಾಸ್ತ್ರದಲ್ಲಿ ಪ್ರಾಚೀನ ಕಾಲದ ಋಷಿಮುನಿಗಳು ಅಂತರ್
ದೃಷ್ಟಿಯುಳ್ಳವರಾಗಿದ್ದರು ಎಂಬ ವಿಷಯವನ್ನು ದೇವರು, ಧರ್ಮದಲ್ಲಿ ವಿಶ್ವಾಸ ಇರುವ ಎಲ್ಲರೂ ಇಂದಿಗೂ ನಂಬುತ್ತಾರೆ. ಅದನ್ನೇ
ಇಂದಿನ ವಿಜ್ಞಾನ 'ಅತೀಂದ್ರಿಯ ಜ್ಞಾನ' ಎಂಬ ಹೆಸರಿನಿಂದ ಕರೆದು, ಅದರ ಅಸ್ತಿತ್ವದ ಕುರಿತು ಪುರಾವೆಗಳನ್ನು ಕಲೆಹಾಕಲು ಪ್ರಯತ್ನಿಸಿದೆ.
ಮನುಷ್ಯರು ಸೃಷ್ಟಿಸಿದ ದೇವರುಗಳಿಗೇ ತಂತಮ್ಮ ಹೆಂಡಂದಿರಿಂದ ಮುಕ್ತಿ ಇಲ್ಲದಿರುವಾಗ ಸಂಸಾರದಿಂದ ವಿಮುಖನಾಗಬಯಸುವುದು ಹಾಸ್ಯಾಸ್ಪದ. ಅವಳ ಪ್ರಕಾರ, ಗಂಡು-ಹೆಣ್ಣಗಳ ಮೋಹ ಅವರರವರು ಮಾಡಿಕೊಂಡಿದ್ದಕ್ಕಿಂತಲೂ ಹೆಚ್ಚಾಗಿ ಸೃಷ್ಟಿಯೇ ಜೀವಿಗಳೊಳಗೆ ತುಂಬಿಸಿಟ್ಟ ಪ್ರೇರಣೆ ಎಂಬಂತಹ ವಿಚಾರಗಳನ್ನು ಹೇಳಿ ಮೂಕಜ್ಜಿ ಕೇಳುಗರಲ್ಲಿ ಅಚ್ಚರಿ ಮೂಡಿಸುತ್ತಾಳೆ. ಇದೇ ಈ ಕಾದಂಬರಿಯ ಕುತೂಹಲವೂ, ವೈಜ್ಞಾನಿಕವಾಗಿ ಸವಾಲು ಆಗುತ್ತದೆ. ವೈಚಾರಿಕತೆ ಹಾಗೂ ಮಾನವೀಯತೆಯ ಸಮನ್ವಯದ ಕಥೆ ಇದು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಹರ್ಷ ಪ್ರಕಟಣಾಲಯವು 1968ರಲ್ಲಿ (ಪುಟ: 290) ಈ ಕಾದಂಬರಿಯನ್ನು ಮೊದಲ ಬಾರಿಗೆ ಪ್ರಕಟಿಸಿತ್ತು.
ಕಾಮೆಂಟ್ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ